Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:4 - ಕನ್ನಡ ಸಮಕಾಲಿಕ ಅನುವಾದ

4 ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯೊ ಝಿತ್ತೊ ಗುಂಡೊ ಹೊವ್ನ್ ಹೊತ್ತ್ಯಾ ಧನಿಯಾಕ್ಡೆ ಯೆವಾ ಲೊಕಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊ ದೆವಾನ್ ತೆಕಾ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:4
31 ತಿಳಿವುಗಳ ಹೋಲಿಕೆ  

ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು