Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:9
50 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾಗಿಯೂ ಅವರಿಂದ ತೆಗೆದುಕೊಳ್ಳುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


“ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು:


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು.


ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು