Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ಸರ್ವೆಸ್ವರಾಚೆ ನದರ್ ನಿತಿನ್ ಚಲ್ತಲ್ಯಾಂಚ್ಯಾ ವರ್ತಿ ಹಾಯ್ ಅನಿ ತೆಚಿ ಕಾನಾ ತೆಂಚ್ಯಾ ಮಾಗ್ನಿಚ್ಯಾ ವರ್ತಿ ಹಾಯ್, ತೆಚ್ಯಾ ಸಾಟ್ನಿ ಕಾನಾಬಿ ಉಗ್ಡಿಚ್ ಹಾತ್, ಖರೆ ಸರ್ವೆಸ್ವರ್ ವಾಯ್ಟ್ ಕರ್ತಲ್ಯಾಂಚ್ಯಾ ವಿರೊದ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:12
21 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.


ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು