Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:22 - ಕನ್ನಡ ಸಮಕಾಲಿಕ ಅನುವಾದ

22 ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ಜೆಜು ಸರ್‍ಗಾಕ್ ಗೆಲಾ, ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ, ಅನಿ ತೊ ದೆವ್‍ದುತಾ, ಅಧಿಕಾರಿಯಾ ಅನಿ ಅಜಾಪಾಂಚ್ಯಾ ವರ್ತಿ ರಾಜ್ವಟ್ಕಿ ಕರುಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:22
24 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


“ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?


ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು