Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:11 - ಕನ್ನಡ ಸಮಕಾಲಿಕ ಅನುವಾದ

11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಶಿಕಾಪಾ ಕರ್ತಲೊ ದೆವಾಚಿ ಗೊಸ್ಟಿಯಾಚ್ ಶಿಕ್ವುಂದಿತ್, ಸೆವಾ ಕರ್ತಲೊ ಮಾನುಸ್ ದೆವಾನ್ ದಯಾ ಕರುನ್ ದಿಲ್ಲ್ಯಾ ಬಳಾವೈನಾ ಸೆವಾ ಕರುಂದಿತ್, ತುಮಿ ಅಸೆ ಕರ್ಲ್ಯಾರ್ ತುಮ್ಚ್ಯಾ ಹರ್ ಎಕ್ ಕಾಮಾತ್ನಿ ಬಿ ಜೆಜುಕ್ರಿಸ್ತಾ ವೈನಾ ದೆವಾಕ್ ಹೊಗ್ಳಾಪ್ ಹೊತಾ, ಅಧಿಕಾರ್ ಅನಿ ಮಹಿಮಾ ಸದಾ ಸರ್ವತಾಕ್ ತೆಜೆಚ್ ಹೊಂವ್ದಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:11
47 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.


ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.


ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು