Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:19 - ಕನ್ನಡ ಸಮಕಾಲಿಕ ಅನುವಾದ

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸೆ ರ್‍ಹಾತಾನಾ ಜೆ ಕೊನ್ ಕಸ್ಟ್ ಸೊಸುನ್ಗೆತಾ ತೆನಿ ತೆಂಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಅಪ್ನಾಕ್ ರಚಲ್ಲ್ಯಾಚೆ ಬರೊಸೊ ಥವ್ನ್ ರ್‍ಹಾತ್ಯಾತ್ ಅನಿ ತೊ ಅಪ್ನಾಚೆ ಗೊಸ್ಟ್ ಕನ್ನಾಬಿ ಪಾಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:19
27 ತಿಳಿವುಗಳ ಹೋಲಿಕೆ  

ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.


ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.


ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು