Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:7 - ಕನ್ನಡ ಸಮಕಾಲಿಕ ಅನುವಾದ

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:7
34 ತಿಳಿವುಗಳ ಹೋಲಿಕೆ  

ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.


“ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


“ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು