Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:5 - ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:5
27 ತಿಳಿವುಗಳ ಹೋಲಿಕೆ  

ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.


ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”


ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.


ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.


ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,


ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು