Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹ್ಯಾ ಜಗಾತ್ಲಿ ಬುರ್ಶಿ ಕಾಮಾ ಅಸಿ ಹಾತ್, ಲೊಕಾಕ್ನಿ ದಿಸ್ತಲೆ, ಅನಿ ಪಾಜೆ ಹೊಲ್ಲೆ, ಹ್ಯಾ ಜಗಾತ್ ಲೊಕಾ ಮೊಟೆಪಾನ್ ದಾಕ್ವುತಲೆ, ಸಗ್ಳೆ ಬಾಬಾಕ್ನಾ ಯೆಯ್ನಾ, ಹೆ ಸಗ್ಳೆ ಜಗಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:16
34 ತಿಳಿವುಗಳ ಹೋಲಿಕೆ  

ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.


“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.


ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,


ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,


ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವೂ ಆಶಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ಈಗ ನಮಗೆ ನಿದರ್ಶನಗಳಾಗಿವೆ.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು