Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:29 - ಕನ್ನಡ ಸಮಕಾಲಿಕ ಅನುವಾದ

29 ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದೆವ್ ನಿತಿವಂತ್ ಮನುನ್ ತುಮ್ಕಾ ಗೊತ್ತ್ ರ್‍ಹಾಲ್ಯಾರ್, ನಿತಿನ್ ಚಲ್ತಾ ತೊ ಹರ್ ಎಕ್ಲೊ ದೆವಾಚೊ ಪೊರ್ ಮನುನ್ ತುಮ್ಕಾ ಗೊತ್ತ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:29
28 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು