Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜಗಾತ್ ಕೊನ್ ತರ್ ಎಕ್ಲೊ ಸಾವ್ಕಾರ್ ರ್‍ಹಾತಾ ಅನಿ ತೊ ಭಾವ್ ನಾತರ್ ಭೆನ್ ಗರ್ಜೆತ್ ಹೊತ್ತೆ ಬಗ್ತಾ, ಅನಿ ತೆಚ್ಯಾ ಗರ್ಜೆಕ್ ಪಾಯ್ನಾ, ತೆಚ್ಯಾಕ್ಡೆ ದೆವಾಚೊ ಪ್ರೆಮ್ ಕಸೊ ರ್‍ಹಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:17
17 ತಿಳಿವುಗಳ ಹೋಲಿಕೆ  

ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.


ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ,


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, “ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ,” ಎಂದು ಹೇಳಿದರೆ ಪ್ರಯೋಜನವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು