Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರಿತಿಚ್ಯಾನು, ಹ್ಯಾ ಜಗಾತ್ ಝುಟಿ ಶಿಕಾಪಾ ಶಿಕ್ವುತಲೆ ಯೆಲ್ಲ್ಯಾ ವೈನಾ, ತುಮಿ ಸಗ್ಳ್ಯಾ ಆತ್ಮ್ಯಾಚಿ ಗೊಸ್ಟಿಚ್ಯಾ ವರ್ತಿ ವಿಶ್ವಾಸ್ ಕರಿನಸ್ತಾನಾ, ತುಮಿ ದೆವಾಚ್ಯಾ ಆತ್ಮ್ಯಾಕ್ನಾ ಯೆಲ್ಲಿ ಗೊಸ್ಟಿಯಾ ಹೊಯ್ಕಿ ನಾ, ಮನುನ್ ಪರಿಕ್ಷಾ ಕರುನ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:1
29 ತಿಳಿವುಗಳ ಹೋಲಿಕೆ  

ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


“ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.


ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಪ್ರವಾದನೆಗಳನ್ನು ಹೀನೈಸಬೇಡಿರಿ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು