Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:4 - ಕನ್ನಡ ಸಮಕಾಲಿಕ ಅನುವಾದ

4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರಿತಿಚ್ಯಾ ಪೊರಾನು, ತುಮಿ ದೆವಾಚಿ ಪೊರಾ, ಅನಿ ಝುಟ್ಯಾ ಪ್ರವಾದ್ಯಾಕ್ನಿ ಹಾರ್‍ವುಲ್ಯಾಸಿ ಕಶ್ಯಾಕ್ ಮಟ್ಲ್ಯಾರ್ ತುಮ್ಚ್ಯಾ ವಾಂಗ್ಡಾ ಹೊತ್ತೊ ದೆವ್ ಹ್ಯಾ ಜಗಾತ್ಲ್ಯಾ ಆತ್ಮ್ಯಾಕಿಂತಾ ಲೈ ತಾಕ್ತಿಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:4
28 ತಿಳಿವುಗಳ ಹೋಲಿಕೆ  

ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ.


“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು