Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಜಗಾಕ್ ಬಗುನ್ ಜಗಾಚ್ಯಾ ನಮನಿಚ್ ಬೊಲ್ತ್ಯಾತ್ ಅನಿ ಹ್ಯೊ ಜಗ್ ತೆನಿ ಸಾಂಗ್ತಲ್ಯಾಕ್ ಕಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:5
15 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು