Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:20 - ಕನ್ನಡ ಸಮಕಾಲಿಕ ಅನುವಾದ

20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾಚ್ಯಾ ಲೆಕಾನ್ ಹ್ಯಾ ಜಗಾಕ್ ಯೆವ್ನ್ ಅಮಿ ಖರ್ಯಾ ದೆವಾಕ್ ವಳ್ಕುನ್ ಘೆಯ್ ಸಾರ್ಕೆ ಅಮ್ಕಾ ಬುದ್ದ್ ದಿಲ್ಯಾನ್ ಮನುನ್ ಅಮ್ಕಾ ಗೊತ್ತ್ ಹಾಯ್, ಅನಿ ದೆವಾಚ್ಯಾ ಲೆಕಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಅಮಿ ಹಾವ್, ಹ್ಯೊಚ್ ಖರ್ಯಾ ದೆವಾಚ್ಯಾ ವಾಂಗ್ಡಾ ಅಮಿ ಹಾತ್, ಹ್ಯೊಚ್ ಖರೊ ದೆವ್ ಅನಿ ಶಾಶ್ವತ್ ಜಿವ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:20
53 ತಿಳಿವುಗಳ ಹೋಲಿಕೆ  

ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.


ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?


ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.


ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು