Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:11 - ಕನ್ನಡ ಸಮಕಾಲಿಕ ಅನುವಾದ

11 ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:11
25 ತಿಳಿವುಗಳ ಹೋಲಿಕೆ  

ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.


“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.


ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.


ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.


ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.


ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,


ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.


ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.


ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.


ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.


ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.


ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.


ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು.


ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!


“ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು