Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:18 - ಕನ್ನಡ ಸಮಕಾಲಿಕ ಅನುವಾದ

18 ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:18
11 ತಿಳಿವುಗಳ ಹೋಲಿಕೆ  

ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.


ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.


ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.


ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು