Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:8
11 ತಿಳಿವುಗಳ ಹೋಲಿಕೆ  

ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.


ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.


“ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು, ಆಕೆಯು ಅವರು ತೋಟಗಾರನೆಂದು ನೆನಸಿ ಅವರಿಗೆ, “ಅಯ್ಯಾ, ನೀನು ಅವರನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಅವರನ್ನು ತೆಗೆದುಕೊಂಡು ಹೋಗುತ್ತೇನೆ,” ಎಂದಳು.


ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


“ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಹೀಗೆಯೇ ಅವನು ಪ್ರತಿ ಸಂವತ್ಸರದಲ್ಲಿಯೂ ಮಾಡುತ್ತಿದ್ದನು, ಇವಳು ಯೆಹೋವ ದೇವರ ಮನೆಗೆ ಹೋಗುತ್ತಿರುವಾಗ ಆ ರೀತಿಯಾಗಿ ಹನ್ನಳನ್ನು ಬಾಧಿಸುತ್ತಿದ್ದಳು. ಅದರಿಂದ ಹನ್ನಳು ಊಟಮಾಡದೆ ಅಳುತ್ತಾ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು