Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಪರವಶನಾಗಿ ಮಾತಾಡುವದನ್ನು ಗುರುತಿನವರು ಕಂಡು ತಮ್ಮ ತಮ್ಮೊಳಗೆ - ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂದು ಮಾತಾಡಿಕೊಳ್ಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:11
10 ತಿಳಿವುಗಳ ಹೋಲಿಕೆ  

ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.


ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.


ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು