Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:16 - ಕನ್ನಡ ಸಮಕಾಲಿಕ ಅನುವಾದ

16 ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು ಎಂಬದಾಗಿ ಹೇಳಿದನೇ ಹೊರತು ಅವನು ಹೇಳಿದ ರಾಜ್ಯದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:16
9 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.


ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.


ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.


ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.


ಅದಕ್ಕೆ ಸೌಲನ ಚಿಕ್ಕಪ್ಪನು, “ಸಮುಯೇಲನು ನಿನಗೆ ಏನು ಹೇಳಿದನು? ದಯಮಾಡಿ ನನಗೆ ತಿಳಿಸು,” ಎಂದನು.


ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.


ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು