Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:3 - ಕನ್ನಡ ಸಮಕಾಲಿಕ ಅನುವಾದ

3 “ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:3
22 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.


ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.


ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.


ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.


“ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.


“ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.


“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.


“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು