Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:7 - ಕನ್ನಡ ಸಮಕಾಲಿಕ ಅನುವಾದ

7 ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:7
20 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.


ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು