Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:4 - ಕನ್ನಡ ಸಮಕಾಲಿಕ ಅನುವಾದ

4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:4
15 ತಿಳಿವುಗಳ ಹೋಲಿಕೆ  

ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.


ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.


ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.


ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.


ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು,


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.


ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು.


ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು