Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:7 - ಕನ್ನಡ ಸಮಕಾಲಿಕ ಅನುವಾದ

7 ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:7
8 ತಿಳಿವುಗಳ ಹೋಲಿಕೆ  

ಅವನು ತನ್ನ ಮನೆಗೆ ಹೋದಾಗ, ಒಂದು ಖಡ್ಗವನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡುಗಳಾಗಿ ಕಡಿದು, ಅವುಗಳನ್ನು ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿದನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.


ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು