Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:14 - ಕನ್ನಡ ಸಮಕಾಲಿಕ ಅನುವಾದ

14 ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:14
11 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು