Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:9 - ಕನ್ನಡ ಸಮಕಾಲಿಕ ಅನುವಾದ

9 “ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:9
15 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.


ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.


ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು