Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:14
21 ತಿಳಿವುಗಳ ಹೋಲಿಕೆ  

ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.


ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.


ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.


ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.


ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,


ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.


ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು