Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:19 - ಕನ್ನಡ ಸಮಕಾಲಿಕ ಅನುವಾದ

19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:19
6 ತಿಳಿವುಗಳ ಹೋಲಿಕೆ  

ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು