Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:15
18 ತಿಳಿವುಗಳ ಹೋಲಿಕೆ  

ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.


ಆಗ ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.


ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು.


ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು