Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:27
6 ತಿಳಿವುಗಳ ಹೋಲಿಕೆ  

ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.


ಆಗ ಸೌಲನು ಯೋನಾತಾನನಿಗೆ, “ನೀನು ಮಾಡಿದ್ದನ್ನು ನನಗೆ ತಿಳಿಸು,” ಎಂದನು. ಅದಕ್ಕೆ ಯೋನಾತಾನನು, “ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ರುಚಿ ನೋಡಿದೆನು, ನಾನು ಸಾಯಬೇಕು,” ಎಂದನು.


ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.


ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.


ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.


ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು