Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:36 - ಕನ್ನಡ ಸಮಕಾಲಿಕ ಅನುವಾದ

36 ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:36
14 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.


ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.


ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು