Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:39 - ಕನ್ನಡ ಸಮಕಾಲಿಕ ಅನುವಾದ

39 ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:39
10 ತಿಳಿವುಗಳ ಹೋಲಿಕೆ  

ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.


ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.


ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು.


ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು.


ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು