1 ಸಮುಯೇಲ 15:23 - ಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.