Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:32 - ಕನ್ನಡ ಸಮಕಾಲಿಕ ಅನುವಾದ

32 ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:32
8 ತಿಳಿವುಗಳ ಹೋಲಿಕೆ  

ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.


ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.


ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು