Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:8 - ಕನ್ನಡ ಸಮಕಾಲಿಕ ಅನುವಾದ

8 ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:8
15 ತಿಳಿವುಗಳ ಹೋಲಿಕೆ  

ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.


ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.


ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.


ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.


ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.


ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.


“ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.


ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.


ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು