Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:9 - ಕನ್ನಡ ಸಮಕಾಲಿಕ ಅನುವಾದ

9 ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:9
10 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.


ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.


ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,


ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.


ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.


ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು