Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:13 - ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:13
27 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,


ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.


ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:


ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.


ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.


ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು