Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:14
17 ತಿಳಿವುಗಳ ಹೋಲಿಕೆ  

ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು,


ಆಗ ಸೌಲನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಹೆದರಿಸುತ್ತದೆ.


ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.


ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.


ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು