Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:16 - ಕನ್ನಡ ಸಮಕಾಲಿಕ ಅನುವಾದ

16 ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಬಾರಿಸಿದರೆ ನಿನಗೆ ಉಪಶಮನವಾಗುವದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:16
10 ತಿಳಿವುಗಳ ಹೋಲಿಕೆ  

ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.


ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.


ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು.


ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.


ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.


ಆಗ ಸೌಲನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಹೆದರಿಸುತ್ತದೆ.


ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು