Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಮೇಕೆಯ ಮರಿಯನ್ನೂ ಕತ್ತೆಯ ಮೇಲೆ ಹೇರಿ, ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:20
8 ತಿಳಿವುಗಳ ಹೋಲಿಕೆ  

ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.


ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,


ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.


ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು