Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:34 - ಕನ್ನಡ ಸಮಕಾಲಿಕ ಅನುವಾದ

34 ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ದಾವೀದನು ಅವನಿಗೆ - ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:34
18 ತಿಳಿವುಗಳ ಹೋಲಿಕೆ  

ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,


ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.


ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.


ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”


ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.


ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು.


ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.


ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.


ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು