Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:12 - ಕನ್ನಡ ಸಮಕಾಲಿಕ ಅನುವಾದ

12 ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:12
23 ತಿಳಿವುಗಳ ಹೋಲಿಕೆ  

ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.


ಅವನು ಜಯಶಾಲಿಯಾಗುತ್ತಿದ್ದದ್ದನ್ನು ಸೌಲನು ಕಂಡು ಅವನಿಗೆ ಭಯಪಟ್ಟಿದ್ದನು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು.


ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು.


ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.


ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು