Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:25
13 ತಿಳಿವುಗಳ ಹೋಲಿಕೆ  

ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.


ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.


ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು.


ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.


ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು