Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೌಲನು ಮೀಕಲಳಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ ಎನ್ನಲು ಆಕೆಯು ಅವನಿಗೆ - ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆಂದು ಅವನು ನನಗೆ ಹೇಳಿದನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:17
10 ತಿಳಿವುಗಳ ಹೋಲಿಕೆ  

ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.


ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.


ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.


ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು.


ಹಾಗೆಯೇ ಸೇವಕರು ಬಂದು ಕಂಡಾಗ, ವಿಗ್ರಹವು ಮಂಚದ ಮೇಲೆ ಇತ್ತು. ಅದರ ತಲೆಗೆ ಒಂದು ಆಡಿನ ಉಣ್ಣೆಯ ತಲೆದಿಂಬು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು