Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:14 - ಕನ್ನಡ ಸಮಕಾಲಿಕ ಅನುವಾದ

14 ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:14
9 ತಿಳಿವುಗಳ ಹೋಲಿಕೆ  

ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,


ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು