Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೇ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:15
8 ತಿಳಿವುಗಳ ಹೋಲಿಕೆ  

ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.


ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.


“ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು