Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:16 - ಕನ್ನಡ ಸಮಕಾಲಿಕ ಅನುವಾದ

16 “ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:16
9 ತಿಳಿವುಗಳ ಹೋಲಿಕೆ  

ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಆದರೆ ದಾನನ ಮಕ್ಕಳು ಅವನಿಗೆ, “ಕೋಪಿಷ್ಟರು ನಿನ್ನ ಮೇಲೆ ಬೀಳದ ಹಾಗೆ ನೀನು ನಿನ್ನ ಪ್ರಾಣವನ್ನೂ, ನಿನ್ನ ಮನೆಯವರ ಪ್ರಾಣವನ್ನೂ ಕಳೆದುಕೊಳ್ಳದ ಹಾಗೆ ನಿನ್ನ ಶಬ್ದ ನಮಗೆ ಕೇಳಿಸದೆ ಇರಲಿ,” ಎಂದರು.


ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.


ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು