Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:24 - ಕನ್ನಡ ಸಮಕಾಲಿಕ ಅನುವಾದ

24 ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:24
16 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ,


ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


“ನೀವು ಇಂಥಾ ಕಾರ್ಯಗಳನ್ನು ಮಾಡುವುದೇನು? ನಾನು ಎಲ್ಲ ಜನರಿಂದ ಈ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು