Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:27 - ಕನ್ನಡ ಸಮಕಾಲಿಕ ಅನುವಾದ

27 ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:27
14 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು.


ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.


ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.


ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.


ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.


ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು