Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:36 - ಕನ್ನಡ ಸಮಕಾಲಿಕ ಅನುವಾದ

36 ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:36
9 ತಿಳಿವುಗಳ ಹೋಲಿಕೆ  

ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.


ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.


ಮೀಕನು ಅವನಿಗೆ, “ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ, ಒಂದು ದುಸ್ತು ವಸ್ತ್ರಗಳನ್ನೂ, ಆಹಾರವನ್ನೂ ಕೊಡುವೆನು,” ಎಂದನು. ಹಾಗೆಯೇ ಲೇವಿಯನು ಹೋದನು.


ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು